Politics

ಪ್ರಧಾನಿ ಮೋದಿಯವರನ್ನು ಹೊಗಳಿದ ಒಮರ್ ಅಬ್ದುಲ್ಲಾ: ಇದ್ದಕ್ಕಿದ್ದಂತೆ ಈ ಬದಲಾವಣೆ ಏಕೆ..?!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಕೇಂದ್ರ ಸರ್ಕಾರದೊಂದಿಗೆ ಉತ್ತಮ ಸಂಬಂಧಗಳನ್ನು ಬಯಸುವ ಮಾತುಗಳನ್ನು ಹಂಚಿಕೊಂಡಿದ್ದಾರೆ. “ಪ್ರಧಾನ ಮಂತ್ರಿ ನರೇಂದ್ರ ಮೋದಿ ಗೌರವಾನ್ವಿತ ವ್ಯಕ್ತಿ. ಮತ್ತೆ 370ನೇ ವಿಧಿ ದೊರೆಯುತ್ತದೆ ಎಂದು ಭಾವಿಸಲು ನಾವು ಬುದ್ಧಿಹೀನರಲ್ಲ,” ಎಂದು ಅಬ್ದುಲ್ಲಾ ಹೇಳಿದ್ದಾರೆ.

ಅಲ್ಲದೆ, “ನಮ್ಮ ಎರಡೂ ಬದಿಯಲ್ಲೂ ಶತ್ರು ರಾಷ್ಟ್ರಗಳಿವೆ, ನಾವು ಕೇಂದ್ರ ಸರ್ಕಾರದೊಂದಿಗೆ ಗಟ್ಟಿಯಾದ ಸಂಬಂಧಗಳನ್ನು ನಿರ್ಮಿಸಲು ಇಚ್ಛಿಸುತ್ತೇವೆ. ಇದು ನಮ್ಮ ರಾಜ್ಯದ ಹಿತಕ್ಕಾಗಿ ಉತ್ತಮ. ನಮ್ಮ ರಾಜ್ಯದ ಅಭಿವೃದ್ಧಿಗೆ ಕೇಂದ್ರದ ಸಹಕಾರ ಅತ್ಯಗತ್ಯ,” ಎಂದು ಹೇಳಿದ್ದಾರೆ.

ಇದರಿಂದಾಗಿ, ಜಮ್ಮು ಮತ್ತು ಕಾಶ್ಮೀರದ ರಾಜಕೀಯ ವಾತಾವರಣದಲ್ಲಿ ಹೊಸ ತಿರುವು ಸೃಷ್ಟಿಯಾಗಿದೆ. ಈ ಹೇಳಿಕೆ ಮೂಲಕ, ಅಬ್ದುಲ್ಲಾ ಕೇಂದ್ರ ಸರ್ಕಾರದೊಂದಿಗೆ ಕೈಜೋಡಿಸಲು ಇಚ್ಛೆ ತೋರಿಸಿದ್ದಾರೆ, ಅದೂ ಪ್ರಧಾನ ಮಂತ್ರಿ ಮೋದಿಯನ್ನು ಮೆಚ್ಚುವುದರ ಮೂಲಕ!

ಈ ಹೇಳಿಕೆ ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಮುಂದಿನ ರಾಜಕೀಯ ಕಹಾನಿ ಹೇಗಿರಲಿದೆ ಎಂಬುದರ ಬಗ್ಗೆ ಕುತೂಹಲ ಹೆಚ್ಚುತ್ತಿದೆ.

Show More

Leave a Reply

Your email address will not be published. Required fields are marked *

Related Articles

Back to top button