CinemaEntertainment

ಜೈಲು ಊಟದಿಂದ ತೂಕ ಕಳೆದುಕೊಂಡರಾ ದಚ್ಚು..?! ಮನೆ ಊಟಕ್ಕಾಗಿ ಹೈಕೋರ್ಟ್‌ಗೆ ಅರ್ಜಿ.

ಬೆಂಗಳೂರು: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2 ತಿಂಗಳು ಜೈಲಿನಲ್ಲಿದ್ದು, ಅಲ್ಲಿ ನೀಡಲಾಗುವ ಆಹಾರದಿಂದ ತೃಪ್ತಿ ಪಡೆಯದ ಕಾರಣ ಮನೆ ಊಟಕ್ಕಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ದರ್ಶನ್ ಅವರು ತಮ್ಮ ಆರೋಗ್ಯದ ಬಗ್ಗೆ ಚಿಂತೆ ವ್ಯಕ್ತಪಡಿಸಿದ್ದು, ಮನೆ ಊಟದ ಜೊತೆಗೆ ಮಲಗಲು ಹಾಸಿಗೆ ಮತ್ತು ಕೆಲವು ಪುಸ್ತಕಗಳನ್ನು ಕೂಡ ಕೇಳಿದ್ದಾರೆ. ಜೈಲಿನ ಆಹಾರದಿಂದ ತೂಕ ಇಳಿಕೆ ಮತ್ತು ಆರೋಗ್ಯ ಸಮಸ್ಯೆಗಳ ಕುರಿತು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೈಲಾಧಿಕಾರಿಗಳು ಹೈಕೋರ್ಟ್‌ಗೆ ಸಲ್ಲಿಸಿದ 10 ದಿನದ ವರದಿಯಲ್ಲಿ, ದರ್ಶನ್‌ಗೆ ಮನೆ ಊಟದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

ಆಗಸ್ಟ್ 28ರವರೆಗೆ ದರ್ಶನ್‌ ಜೈಲು ಕಸ್ಟಡಿ ವಿಸ್ತರಣೆ ಮಾಡಲಾಗಿದೆ. ಹೈಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ಮುಂದುವರಿಯುತ್ತಿದ್ದು, ಜಾಮೀನು ನೀಡದ ಕಾರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳ ಪರಿಶೀಲನೆ ನಡೆಯುತ್ತಿದೆ.

Show More

Related Articles

Leave a Reply

Your email address will not be published. Required fields are marked *

Back to top button