Politics

ಕೆಎಎಸ್ ಮರುಪರೀಕ್ಷೆ: ಅಸಮರ್ಪಕ ಅಧಿಕಾರಿಗಳ ಅಮಾನತ್ತಿಗೆ ಆದೇಶ ನೀಡಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರು: ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡ ಪ್ರಶ್ನೆಗಳ ಅಸಮರ್ಪಕ ಅನುವಾದವು ಈಗ ರಾಜ್ಯದಲ್ಲಿ ತೀವ್ರ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಇದರ ಬೆನ್ನಲ್ಲೇ ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗುವುದನ್ನು ತಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಕ್ರಮ ಕೈಗೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ಹಂಚಿಕೊಂಡ ಸಿಎಂ, ಮುಂದಿನ ಎರಡು ತಿಂಗಳಲ್ಲಿ ಮರುಪರೀಕ್ಷೆ ನಡೆಸಲು ಕೆಪಿಎಸ್‌ಸಿಗೆ ನಿರ್ದೇಶನ ನೀಡಿದ್ದಾರೆ.

ಸುದ್ದಿ ತಿಳಿದು ಬಂದ ತಕ್ಷಣವೇ, ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ತಕ್ಷಣ ಸೇವೆಯಿಂದ ಅಮಾನತು ಮಾಡಿ, ಮುಂಬರುವ ಎಲ್ಲಾ ಪರೀಕ್ಷೆಗಳನ್ನು ಜವಾಬ್ದಾರಿಯುತವಾಗಿ ಮತ್ತು ಸಮರ್ಪಕವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

“ನಮ್ಮ ಸರ್ಕಾರ ನೇಮಕಾತಿ ಪ್ರಕ್ರಿಯೆಯ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಕಾಪಾಡಲು ಬದ್ಧವಾಗಿದೆ. ಪರೀಕ್ಷಾರ್ಥಿಗಳ ಹಿತಕ್ಕೆ ನಾವು ಯಾವುದೇ ಕಡಿವಾಣ ಹಾಕುವುದಿಲ್ಲ,” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ, ಎಚ್ಚರಿಕೆ ನೀಡಿರುವ ಸಿಎಂ, ಕೆಪಿಎಸ್‌ಸಿ ಮೊದಲಿನ ತಪ್ಪುಗಳನ್ನು ಮರುಕಳಿಸಬಾರದು ಎಂಬ ಗಂಭೀರ ಸೂಚನೆಯನ್ನು ನೀಡಿದ್ದಾರೆ.

ಈ ಅವ್ಯವಹಾರದಿಂದ ಬೇಸರಗೊಂಡಿರುವ ಅನೇಕ ಅಭ್ಯರ್ಥಿಗಳು, ಸರ್ಕಾರದ ಈಗಿನ ಕ್ರಮವನ್ನು ಸ್ವಾಗತಿಸಿದ್ದಾರೆ ಮತ್ತು ಮರುಪರೀಕ್ಷೆಯ ಘೋಷಣೆಗೆ ಧನ್ಯವಾದ ಹೇಳುತ್ತಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button