Politics

ವಯನಾಡು ಭೂಕುಸಿತ: ಸಂತ್ರಸ್ತರನ್ನು ಭೇಟಿ ಮಾಡಿಲಿದ್ದಾರೆಯೇ ಪ್ರಧಾನಿ ಮೋದಿ?

ವಯನಾಡ್: ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡು ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೇಟಿ ನೀಡಲು ನಿರ್ಧರಿಸಿದ್ದಾರೆ. ಚೂರಾಲ್ಮಳ ಮತ್ತು ಮುಂಡಕ್ಕೈ ಗ್ರಾಮಗಳಲ್ಲಿ ಸಂಭವಿಸಿದ ಭೂಕುಸಿತದಿಂದ 417ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, ಸಾವಿರಾರು ಜನ ನಿರಾಶ್ರಿತರಾಗಿ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ.

ಪ್ರಧಾನಿ ಮೋದಿ, ಇಂತಹ ಸಂಕಟದ ಪರಿಸ್ಥಿತಿಯಲ್ಲಿ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದ್ದು, ಅವರು ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ. ವಿಶೇಷವಾಗಿ, ವಯನಾಡಿನ ಈ ಪರಿಹಾರ ಶಿಬಿರಗಳಲ್ಲಿ 10,000 ಕ್ಕೂ ಹೆಚ್ಚು ಜನ ತಾತ್ಕಾಲಿಕವಾಗಿ ಆಶ್ರಯ ಪಡೆದಿದ್ದಾರೆ, ಅವರೊಂದಿಗೆ ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸುವ ನಿರೀಕ್ಷೆಯಿದೆ.

ಈ ದುರಂತದ ಹಿನ್ನೆಲೆಯಲ್ಲಿ ವಯನಾಡಿನಲ್ಲಿ ವಿಪತ್ತು ಘೋಷಣೆ ಮಾಡುವಂತೆ ಆಗ್ರಹಗಳು ಬಲಪಡುತ್ತಿದ್ದು, ಪ್ರಧಾನಿಯವರ ಭೇಟಿ ಈ ವಿಷಯದಲ್ಲಿ ಸಕಾರಾತ್ಮಕ ಬೆಳವಣಿಗೆ ಸಾಧ್ಯತೆ ಇದೆ. ಈ ಸಂಕಷ್ಟದಲ್ಲಿರುವ ಜನರಿಗೆ ಸರ್ಕಾರವು ಸಮರ್ಪಕ ಪರಿಹಾರ ಒದಗಿಸಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ.

ವಯನಾಡಿನ ದುರಂತ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ಸರ್ಕಾರ ಬದ್ಧವಾಗಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿಯವರ ಭೇಟಿ, ಇಂತಹ ಪ್ರಾಕೃತಿಕ ವಿಕೋಪಗಳಿಗೆ ಸರಿಯಾದ ನಿರ್ವಹಣೆ ಮತ್ತು ಪರಿಹಾರದ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

Show More

Related Articles

Leave a Reply

Your email address will not be published. Required fields are marked *

Back to top button